Breaking News

ರಾಜಕಾರಣಿಗಳ ಸೆಕ್ಸ್‌ ವಿಡಿಯೋ & ಫೋಟೋಸ್ SITಗೆ ಕೊಟ್ಟ ಸಂತ್ರಸ್ತೆ

Spread the love

ಬೆಂಗಳೂರು, ಅಕ್ಟೋಬರ್ 03: ಬೆಂಗಳೂರಿನ ಆರ್‌.ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಬೆದರಿಕೆ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ಆರೋಪದ ಮೇಲೆ ದೂರು ದಾಖಲಾಗಿವೆ. ಶಾಸಕರು ಮಹಿಳೆಯನ್ನು ಹನಿಟ್ರ್ಯಾಪ್‌ಗೆ ಬಳಸಿದ್ದಾರೆಂಬ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ.

ಶಾಸಕರ ಮೇಲೆ ದೂರು ನೀಡಿದ್ದ ದೂರುದಾರೆ ಸಂತ್ರಸ್ತೆಯೇ ಇದೀಗ ತನಿಖಾಧಿಕಾರಿಗಳ ಮುಂದೆ ಕೆಲವು ರಾಜಕಾರಣಿಗಳ ಬಂಡವಾಳ ಬಿಚ್ಚಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಶಾಸಕ ಮುನಿರತ್ನ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ 37 ವರ್ಷದ ಮಹಿಳೆ ಇದೀಗ SIT ವಿಚಾರಣೆಗೆ ಹಾಜರಾಗಿದ್ದಾರೆ. ಬುಧವಾರ ರಾಜ್ಯ ಅಪರಾಧ ತನಿಖಾ ಇಲಾಖೆ ಕಚೇರಿಯಲ್ಲಿ ವಿಚಾರಣೆ ನಡೆದ ಮಾಹಿತಿ ಲಭ್ಯವಾಗಿದೆ.

ವಿಚಾರಣೆ ವೇಳೆ ಮಹಿಳೆಯು ಕೆಲವು ಮಹತ್ವದ ಮಾಹಿತಿ ನೀಡಿದ್ದಾರೆ. ಅಲ್ಲದೇ ವಿಶೇಷ ತನಿಖಾಧಿಕಾರಿಗಳ ಮುಂದೆ ಕೆಲವು ರಾಜಕಾರಣಗಳ ಸೆಕ್ಸ್ ವಿಡಿಯೋ ಹಾಗೂ ಫೋಟೋಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಹನಿಟ್ರ್ಯಾಪ್ ಮಾಡಲು ನನ್ನನ್ನು ಬಳಸಿಕೊಳ್ಳಲಾಗಿದೆ ಎಂದು ವಿಚಾರಣೆ ವೇಳೆ ಮತ್ತೆ ತಿಳಿಸಿದ್ದಾರೆ.

ನನ್ನ ಮೇಲೆ ಲೈಂಗಿಕ ದಾಳಿ ನಡೆಸಿದ ಶಾಸಕ ಮುನಿರತ್ನ ನನ್ನ ಬಳಸಿಕೊಂಡು ಕೆಲವು ರಾಜಕಾರಣಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದರು ಎಂದು ಸಂತ್ರಸ್ತೆ ಎಸ್‌ಐಟಿ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ಸೆಕ್ಸ ವಿಡಿಯೋ, ಫೋಟೋಗಳನ್ನು ಸಾಕ್ಷ್ಯವಾಗಿ ತನಿಖಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಹೆದರಿಸಿ ಕೃತ್ಯಕ್ಕೆ ಬಳಕೆ: ಸಂತ್ರಸ್ತ ಮಹಿಳೆ

ಸಂತ್ರಸ್ತೆ ನೀಡಿದ ಸಾಕ್ಷ್ಯಾಧಾರಗಳಲ್ಲಿ ಮಾಜಿ ಶಾಸಕ, ಬಿಬಿಎಂಪಿ ಮಾಜಿ ಸದಸದ್ಯ ಹಾಗೂ ಮೂವರು ಪೊಲೀಸ್ ಅಧಿಕಾರಿಗಳು ಇರುವ ಅಶ್ಲೀಲ ವಿಡಿಯೋ ಮತ್ತು ಫೋಟೋ ನೀಡಿದ್ದಾರೆ. ನನ್ನನ್ನು ಹೆದರಿಸಿ, ಬೆದರಿಸಿ ಈ ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ. ಎದೆಲ್ಲದಕ್ಕೂ ಶಾಸಕ ಮುನಿರತ್ನ ಕಾರಣ, ನನ್ನ ತಪ್ಪಿಲ್ಲ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಇದಷ್ಟೆ ಅಲ್ಲದೇ ದೂರದಾರೆ ಸಂತ್ರಸ್ತೆಯ ಮೊಬೈಲ್ ಅನ್ನು ಎಸ್‌ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಒಂದಷ್ಟು ವಿಡಿಯೋಗಳು, ಪುರಾವೆಗಳು ಸಿಕ್ಕಿವೆ. ಅವೆಲ್ಲವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದಾರೆ.

ಕೆಲವು ಹೇಳಿಕೆ ದಾಖಲಿಸಿ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಆರ್‌ಆರ್‌ ನಗರ ವ್ಯಾಪ್ತಿಯ ಮುಖಂಡರು, ಪತ್ರಕರ್ತರ, ಮುನಿರತ್ನ ಆಪ್ತರನ್ನು ಸೇರಿದಂತೆ ಹಲವರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಕೆಲವರನ್ನು ಸಾಕ್ಷಿಯಾಗಿಯು ಪರಿಗಣಿಸಿದ್ದಾರೆ. ಸದ್ಯ ಎಸ್‌ಐಟಿ ಕೈಸೇರಿರುವ ಸೆಕ್ಸ್ ವಿಡಿಯೋ, ಫೋಟೋಗಳು ಹೊರ ಬಂದರೆ ರಾಜ್ಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಯಾಗುವುದು ಖಚಿತ.

ಜಾತಿ ನಿಂದನೆ ಬೆದರಿಕೆ ಆರೋಪ ಮೇಲೆ ಪರಪ್ಪನ ಅಗ್ರಹಾರದಿಂದ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಲೈಂಗಿಕ ದೌರ್ಜನ್ಯ ಆರೋಪ ಮೇರೆಗೆ ರಾಮನಗರ ಪೊಲೀಸರು ಶಾಸಕ ಮುನಿರತ್ನರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ