Breaking News

ಮುಡಾ ನಿವೇಶನ ವಾಪಸ್‌ ಕೊಟ್ಟರೆ ತಪ್ಪೇನು: ಸಚಿವ ಸಂತೋಷ್‌ ಲಾಡ್‌

Spread the love

ಧಾರವಾಡ: ‘ಮುಡಾ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ‌ ವಾಪಸ್‌ ನೀಡಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರ ಗೌರವ ಮತ್ತು ಪ್ರತಿಷ್ಠೆ ತುಂಬಾ ಮುಖ್ಯ. ಅದಕ್ಕೆ ನಿವೇಶನಗಳನ್ನು ವಾಪಸ್‌ ನೀಡಿದ್ದಾರೆ’ ಎಂದು ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

 

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದರು. ನಿವೇಶನಗಳನ್ನು ವಾಪಸ್‌ ನೀಡಿದ್ದಕ್ಕೆ ‘ಯು ಟರ್ನ್‌’ ಎಂದರೆ ಏನರ್ಥ? ನಿವೇಶನಗಳನ್ನು ವಾಪಸ್‌ ನೀಡಬಾರದು ಎಂಬ ಕಾನೂನು ಇದೆಯೇ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರ ಪತ್ನಿ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡಿಲ್ಲ. ಅವರ ವಿರುದ್ಧ ಲೋಕಾಯುಕ್ತ ಮತ್ತು ಇ.ಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆದಿದೆ. ಇ.ಡಿ ಬಳಸಿಕೊಂಡು ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುವುದು ರಾಜಕೀಯ ಕುತಂತ್ರ’ ಎಂದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ