Breaking News

ಮಂತ್ರಾಲಯ’ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

Spread the love

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಮಂತ್ರಾಲಯ(ಸಚಿವಾಲಯ)ದ ಛಾವಣಿಯಿಂದ ಜಿಗಿದಿದ್ದು, ಕೆಳಗೆ ಸುರಕ್ಷತಾ ನೆಟ್ ಅಳವಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

'ಮಂತ್ರಾಲಯ'ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರವಾದ ಮಂತ್ರಾಲಯದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಅವರು ಜಿಗಿದಿದ್ದಾರೆ ಎನ್ನಲಾಗಿದೆ.

ಮೂರನೇ ಮಹಡಿಯಿಂದ ಜಿಗಿದ ಬಳಿಕ ನೆಟ್​ನಲ್ಲಿ ಸಿಲುಕಿದ್ದ ಜಿರ್ವಾಲ್ ಅವರನ್ನು ಹೊರಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಇನ್ನೂ ಕೆಲವರು ನೆಟ್‌ಗೆ ಹಾರಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅವರಲ್ಲಿ ಬುಡಕಟ್ಟು ಶಾಸಕರೂ ಇದ್ದರು. ಎಲ್ಲ ಶಾಸಕರು ನೆಟ್‌ನಲ್ಲಿಯೇ ನಿಂತು ಘೋಷಣೆಗಳನ್ನು ಕೂಗಲು ಆರಂಭಿಸಿದರು.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ.

Spread the loveದಾವಣಗೆರೆ: ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವುದರ ನಡುವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ