Breaking News

ತೀವ್ರಗೊಂಡ ಪಿಡಿಒ,ಅನಿರ್ದಿಷ್ಟಾವಧಿ ಪ್ರತಿಭಟನೆ

Spread the love

ಬೆಂಗಳೂರು, ಅ.4- ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ.

ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

 

ನಮದು ಶಾಂತಿಯುತ ಹೋರಾಟ. ನಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ ಇಲಾಖೆ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.ಅತ್ತ ನಾವು ಎಷ್ಟೇ ಬಾರಿ ಮನವಿ ಸಲ್ಲಿಸಿದರೂ ಅದನ್ನು ಕಸದ ಬುಟ್ಟಿಗೆ ಎಸೆದು ನಮನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಹೋರಾಟದ ಹಾದಿ ಅನಿವಾರ್ಯವಾಗಿತ್ತು ಎಂದು ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾಡಾಶೆಟ್ಟಿಹಳ್ಳಿ ಸತೀಶ್‌ ಹೇಳಿದ್ದಾರೆ.

ಯಾವುದೇ ಸೂಚನೆ ನೀಡದೆ ವರ್ಗಾವಣೆ ಮಾಡಲಾಗುತ್ತಿದೆ. ಬಡತಿಯಲ್ಲೂ ಅನ್ಯಾಯವಾಗುತ್ತಿದೆ. ನಿರಂತರ ಕೆಲಸರಜೆ ನೀಡದೆ ಸತಾಯಿಸುವುದೂ ಸೇರಿದಂತೆ ಹಲವಾರು ನಮ ಬೇಡಿಕೆ ದೂರು-ದುಮಾನಗಳನ್ನು ಸಚಿವರ ಗಮನಕ್ಕೆ ತಂದಿದ್ದೇವೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ