Breaking News

ಹರಿಯಾಣ & ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿಗೆ ಆಘಾತ?

Spread the love

ಬಿಜೆಪಿ ಬಲಿಷ್ಠವಾಗಿದೆ, ಬಿಜೆಪಿ ಪಕ್ಷವು ಎಂತಹ ಚುನಾವಣೆ ಇದ್ದರೂ ಯಾವುದೇ ಅಡೆತಡೆ ಇಲ್ಲದೆ ಗೆದ್ದು ಬೀಗಲಿದೆ, ಬಿಜೆಪಿ ಪಕ್ಷವನ್ನು ಸೋಲಿಸುವುದು ಕಷ್ಟ… ಹೀಗೆ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಪಕ್ಷದ ಬಗ್ಗೆ ಕೆಲವು ಕಠಿಣವಾದ ನಂಬಿಕೆಗಳು ಹುಟ್ಟಿಕೊಂಡಿದ್ದವು.

ಈ ನಂಬಿಕೆಗಳು ಚುನಾವಣೆಯಲ್ಲಿ ಕೈಹಿಡಿದು ನಡೆಸುವ ನಿರೀಕ್ಷೆ ಕೂಡ ಇತ್ತು. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ನಡೆದ ಘಟನೆಗಳು ಇದೀಗ ಬಿಜೆಪಿ ಪಕ್ಷವನ್ನು ಸೋಲಿನ ಸುಳಿಗೆ ತಳ್ಳಿದೆಯಾ? ಹರಿಯಾಣ & ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಗುತ್ತಿದೆ?

ಬಿಜೆಪಿ ಚುನಾವಣಾ ಇತಿಹಾಸದಲ್ಲಿ 2014ರ ತನಕ ಒಂದು ಲೆಕ್ಕ, 2014 ನಂತರ ಶುರುವಾಗಿದ್ದೇ ಮತ್ತೊಂದು ಲೆಕ್ಕ. ಯಾಕಂದ್ರೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ & ಜೊತೆಗಾರ ಪಕ್ಷಗಳು ದೊಡ್ಡ ಗೆಲುವು ಸಾಧಿಸಿದ್ದವು. ಆ ನಂತರ 2019ರ ಲೋಕಸಭೆ ಕೂಡ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿತ್ತು. ಹೀಗಿದ್ದಾಗಲೇ 2024ರ ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಹೊಸ ಇತಿಹಾಸ ನಿರ್ಮಾಣ ಮಾಡುವುದು ಗ್ಯಾರಂಟಿ ಅಂತಾ ಹೇಳಲಾಗಿತ್ತು. ಆದರೆ ಫಲಿತಾಂಶ ಬಂದಾಗ ಖುದ್ದು ಬಿಜೆಪಿ ನಾಯಕರು ಕೂಡ ಆ ರಿಸಲ್ಟ್ ನೋಡಿ ಒಮ್ಮೆ ಯೋಚಿಸುವ ಪರಿಸ್ಥಿತಿ ಬಂದಿತ್ತು. ಹೀಗೆ 2024ರ ಲೋಕಸಭೆ ಚುನಾವಣೆ ಆಘಾತದ ಬೆನ್ನಲ್ಲೇ ಮತ್ತೊಂದು ಶಾಕ್ ಇದೀಗ ಬಿಜೆಪಿಗೆ ಸಿಗುತ್ತಿದೆಯಾ?


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ