Breaking News

ಉರ್ದು ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಶೀಘ್ರದಲ್ಲಿಯೇ ಮಾಡಲಾಗುವುದು’ ಎಂದ ಶಾಸಕ ಗಣೇಶ ಹುಕ್ಕೇರಿ

Spread the love

ಚಿಕ್ಕೋಡಿ: ‘ಚಿಕ್ಕೋಡಿ ಸದಲಗಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಪಸಂಖ್ಯಾತರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುತ್ತಿದೆ. ಹಿರೇಕೋಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಶೀಘ್ರದಲ್ಲಿಯೇ ಮಾಡಲಾಗುವುದು’ ಎಂದು ಶಾಸಕ ಗಣೇಶ ಹುಕ್ಕೇರಿ ಭರವಸೆ ನೀಡಿದರು.

 

ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿ ಶನಿವಾರ ಮುಸ್ಲಿಂ ಸಮುದಾಯದವರಿಗಾಗಿ ₹20 ಲಕ್ಷ ವೆಚ್ಚದ ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಮುಸ್ಲಿಂ ಸಮುದಾಯದ ಜನರಿಗೆ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗಲಿ ಎಂಬ ಕಾರಣದಿಂದ ಶಾದಿಮಹಲ್ ನಿರ್ಮಾಣ ಮಾಡಲಾಗುತ್ತಿದೆ. ದೇಸಾಯಿ ಅವರ ತೋಟದ ಬಳಿ ಕಿರು ಸೇತುವೆ ನಿರ್ಮಾಣ ಮಾಡಲಾಗುವುದು’ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ