Breaking News

ಶಬರಿ ಕೊಳ್ಳ ಪ್ರವಾಸಿ ತಾಣ ಮಾಡಲು ಕ್ರಮ: ಸಂಸದ ಜಗದೀಶ ಶೆಟ್ಟರ್‌

Spread the love

ರಾಮದುರ್ಗ: ‘ತಾಲ್ಲೂಕಿನ ಸುರೇಬಾನ ಸಮೀಪದ ಶಬರಿ ಕೊಳ್ಳದ ದೇವಸ್ಥಾನವನ್ನು ಪ್ರವಾಸಿ ತಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ತಾಲ್ಲೂಕಿನ ಶಬರಿ ಕೊಳ್ಳದ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದೇವಿ ದರ್ಶನದ ನಂತರ ಮಾತನಾಡಿದ ಅವರು, ತಾಲ್ಲೂಕಿನಲ್ಲಿರುವ ಐತಿಹಾಸಿಕ ಶಬರಿಕೊಳ್ಳದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ದೊರಕಿಸಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು.

ರಾಮದುರ್ಗ | ಶಬರಿ ಕೊಳ್ಳ ಪ್ರವಾಸಿ ತಾಣ ಮಾಡಲು ಕ್ರಮ: ಸಂಸದ ಜಗದೀಶ ಶೆಟ್ಟರ್‌

ರಾಮದುರ್ಗ ಮಂಡಲ ಅಧ್ಯಕ್ಷ ಡಾ. ಕೆ.ವಿ ಪಾಟೀಲ, ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ರಾಜೇಶ್ ಬೀಳಗಿ, ಸಂಗನಗೌಡರ ಪಾಟೀಲ, ನಿಂಗಪ್ಪ ಮೆಳ್ಳಿಕೇರಿ, ಮಹಾದೇವಪ್ಪ ಮದಕಟ್ಟಿ, ಶ್ರೀಶೈಲ ಮಳ್ಳಿಕೇರಿ, ನಿಂಗಪ್ಪ ಮುಳ್ಳೂರ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣ್ ಹೂಲಗೇರಿ ಹಾಗೂ ಗ್ರಾಮಸ್ಥರು ಹಾಜರಿದ್ದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ