Breaking News

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ

Spread the love

ಬೆಳಗಾವಿ: ಹಳೆ‌ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ನಿತೇಶ್ ಕುಮಾರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ‌ ದಡ್ಡಿ, ಬಸವಣ್ಣಿ ಸಿದ್ದಪ್ಪ ನಾಯಿಕ, ಸವೆನಾ ಸಿದ್ದಪ್ಪ ದಡ್ಡಿ ಹಾಗೂ ಪ್ರಧಾನಿ ಶೇಖರ ವಾಘಮೋಡೆ ಎಂಬಾತರು ಹಲ್ಲೆ ಮಾಡಿದ್ದಾರೆ.

ಆರೋಪಿಗಳ ಸಂಬಂಧಿಕನ ಮೇಲೆ ಹಲ್ಲೆ ಮಾಡಿದ್ದ ಎಂಬ ಕಾರಣಕ್ಕೆ ಎಲ್ಲರೂ ಸೇರಿ ಈತನ ಮೇಲೆ ಹಲ್ಲೆ‌ ನಡೆಸಿದ್ದಾರೆ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ