Breaking News
Home / ಬಳ್ಳಾರಿ / ಬೆಳಗಾವಿ ವಿಭಜನೆ ಮಾಡಲು ತಾಂತ್ರಿಕ ತೊಂದರೆ ಇದೆ ಎಂದು ಹೇಳಿದ ಲಕ್ಷ್ಮಣ ಸವದಿ

ಬೆಳಗಾವಿ ವಿಭಜನೆ ಮಾಡಲು ತಾಂತ್ರಿಕ ತೊಂದರೆ ಇದೆ ಎಂದು ಹೇಳಿದ ಲಕ್ಷ್ಮಣ ಸವದಿ

Spread the love

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ ಮಾಡುತ್ತಾರೆ ಎಂದರು.

ಬಳ್ಳಾರಿ ಜಿಲ್ಲೆಯ ವಿಭಜನೆ ವಿಚಾರವಾಗಿ ಪ್ರತಿಕ್ರಿಯಿಸಿ, ವಿಜಯನಗರ ಜಿಲ್ಲೆ ರಚನೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿದ್ದು, ಬೆಳಗಾವಿ ವಿಭಜನೆ ಮಾಡಲು ತಾಂತ್ರಿಕ ತೊಂದರೆ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ: R..ಅಶೋಕ್

Spread the loveಬಳ್ಳಾರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ