Breaking News

ಯೋಜನೆ ತರಲು ಯೋಗ್ಯತೆ ಇಲ್ಲದವರು ಟೀಕೆ: ಪಿ.ಎಂ.ನರೇಂದ್ರಸ್ವಾಮಿ

Spread the love

ಳವಳ್ಳಿ: ‘ಶಾಸಕರಾಗಿದ್ದಾಗ ತಾಲ್ಲೂಕಿಗೆ ಒಂದೇ ಒಂದು ನೀರಾವರಿ ಯೋಜನೆ ತರಲು ಯೋಗ್ಯತೆ ಇಲ್ಲದವರು ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದರ ಬಗ್ಗೆ ನನಗೆ ಪಾಠ ಮಾಡಲು ಬರುತ್ತಾರೆ’ ಎಂದು ಮಾಜಿ ಶಾಸಕ ಕೆ.ಅನ್ನದಾನಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕಿಡಿಕಾರಿದರು.

 

‘ಶಾಸಕನಾಗಿದ್ದ ವೇಳೆ ಯಾವ ಯೋಜನೆಯನ್ನು ಕ್ಷೇತ್ರಕ್ಕೆ ತರಲು ಆಗದವರು ನನ್ನ ಅವಧಿಯ ಪಟ್ಟಣದ ಕುಡಿಯುವ ನೀರಿನ ಯೋಜನೆ, ಕಿರುಗಾವಲು ಬಹುಗ್ರಾಮ ಕುಡಿಯುವ ನೀರು ಯೋಜನೆ, ತಿಟ್ಟಮಾರನಹಳ್ಳಿ ಏತ ನೀರಾವರಿ ಯೋಜನೆ, ಪೂರಿಗಾಲಿ ಹನಿ ನೀರಾವರಿ ಯೋಜನೆ ಸೇರಿ ಹಲವು ಯೋಜನೆಗಳನ್ನು ಹಳ್ಳಹಿಡಿಸಿದ ಮಹಾನುಭವ ಕೆರೆಗಳಿಗೆ ಬಾಗಿನ ಅರ್ಪಿಸುವುದನ್ನು ಟೀಕಿಸುತ್ತಾರೆ’ ಎಂದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿ ಮಾತನಾಡಿ ಮಾಜಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು. ‘ ಕೆಲಸ ಮಾಡುವವರಿಗೆ ಅಡ್ಡಗಾಲು ಹಾಕಿ ಓಡುವವರಿಗೆ ತೊಡರುಗಾಲು ಹಾಕುವ ಆಟ ಹೆಚ್ಚು ದಿನ ನಡೆಯುವುದಿಲ್ಲ’ ಎಂದರು.

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ