Breaking News

ಪಡಿತರ ಚೀಟಿದಾರರೇ ಗಮನಿಸಿ : ` E-KYC’ ಮಾಡದಿದ್ರೆ ನಿಮ್ಮ ‘BPL’ ಕಾರ್ಡ್ ಕ್ಯಾನ್ಸಲ್ !

Spread the love

ಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.

 

ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07 ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಾಯಂಕಾಲ 04 ರಿಂದ ರಾತ್ರಿ 09 ಗಂಟೆಯವರೆಗೆ ಮಂಗಳವಾರ ರಜಾ ಹೊರತುಪಡಿಸಿ ಉಳಿದ ದಿನಗಳಂದು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ- ಕೆವೈಸಿ ಮಾಡುವ ಹಾಗೂ ಎನ್‍ಎಫ್‍ಎಸ್‍ಎ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವದು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ