Breaking News

ಮುಖ್ಯಮಂತ್ರಿ ಆಕಾಂಕ್ಷಿತರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು: ಬಿ.ವೈ.ವಿಜಯೇಂದ್ರ

Spread the love

ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವವರೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸುವರು ಎಂದು ಹೇಳುವವರೇ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.

ಅವರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು’ ಎಂದರು.

‘ಸಿದ್ದರಾಮಯ್ಯ ಅವರು ಸೂಚಿಸುವ ವ್ಯಕ್ತಿಗಳೇ ಸಹಜವಾಗಿ ಮುಖ್ಯಮಂತ್ರಿಯಾಗುತ್ತಾರೆ. ಹೀಗಾಗಿ ಅವರನ್ನು ಓಲೈಸಿಕೊಳ್ಳಲು ಪದೇ ಪದೇ ಅನಿವಾರ್ಯವಾಗಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಹೇಳುತ್ತಿದ್ದಾರೆ. ಆದರೆ, ದಸರಾ ನಂತರ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ’ ಎಂದು ಹೇಳಿದರು.

 


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ