ಚಾಮರಾಜನಗರ, ಅಕ್ಟೋಬರ್, 11: ಇಂದು (ಅಕ್ಟೋಬರ್ 11) ಆಯುಧ ಪೂಜಾ ಕಾರ್ಯಗಳು ನಡೆಯುತ್ತಿವೆ. ಮತ್ತೊಂದೆಡೆ ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಸಗಾಯ್ ರಾಜ್ ಪ್ರಾರ್ಥನೆ, ಶುಭ ಸಂದೇಶ ತಿಳಿಸಿ ಪವಿತ್ರ ಜಲವನ್ನು ನೂರಾರು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಯಾವುದೇ ಅಪಘಾತಗಳಾಗದಿರಲಿ, ಶುಭ-ಲಾಭ ತರಲಿ ಎಂದು ಹಾರೈಸಿದರು.