Breaking News

ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು

Spread the love

ಚಾಮರಾಜನಗರ, ಅಕ್ಟೋಬರ್‌, 11: ಇಂದು (ಅಕ್ಟೋಬರ್‌ 11) ಆಯುಧ ಪೂಜಾ ಕಾರ್ಯಗಳು ನಡೆಯುತ್ತಿವೆ. ಮತ್ತೊಂದೆಡೆ ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಹನೂರು: ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು

ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್‌ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಸಗಾಯ್ ರಾಜ್ ಪ್ರಾರ್ಥನೆ, ಶುಭ ಸಂದೇಶ ತಿಳಿಸಿ ಪವಿತ್ರ ಜಲವನ್ನು ನೂರಾರು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಯಾವುದೇ ಅಪಘಾತಗಳಾಗದಿರಲಿ, ಶುಭ-ಲಾಭ ತರಲಿ ಎಂದು ಹಾರೈಸಿದರು‌.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ