Breaking News

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ಅ.14 ತರೂರ್‌ ಅರ್ಜಿ ವಿಚಾರಣೆ

Spread the love

ವದೆಹಲಿ: ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೋಮವಾರ ನಡೆಸಲಿದೆ.

‘ನರೇಂದ್ರ ಮೋದಿ ಶಿವಲಿಂಗದ ಮೇಲೆ ಕುಳಿತ ಚೇಳು ಇದ್ದಂತೆ’ ಎಂದು ಆರ್‌ಎಸ್‌ಎಸ್‌ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ತರೂರ್‌ ಭಾಷಣ ಮಾಡಿದ್ದರು.

ಈ ಸಂಬಂಧ ತರೂರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸೆ. 10ರಂದು ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ಸಂಬಂಧ ಅಭಿಪ್ರಾಯ ತಿಳಿಸುವಂತೆ ದೆಹಲಿ ಪೊಲೀಸ್‌ ಹಾಗೂ ದೂರು ದಾಖಲಿಸಿರುವ ಬಿಜೆಪಿ ನಾಯಕ ರಾಜೀವ್‌ ಬಬ್ಬರ್‌ ಅವರಿಗೆ ಸುಪ್ರೀಂಕೋರ್ಟ್‌, ನೋಟಿಸ್‌ ನೀಡಿದೆ.

ನ್ಯಾಯಮೂರ್ತಿ ಹೃಷಿಕೇಶ್‌ ರಾಯ್‌ ಹಾಗೂ ಎಸ್‌ವಿಎನ್‌ ಭಟ್ಟಿ ನೇತೃತ್ವದ ನ್ಯಾಯಪೀಠದ ಮುಂದೆ ಅ.14ರಂದು ಈ ಅರ್ಜಿ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಶಶಿ ತರೂರ್‌ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ.29ರಂದು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ