Breaking News

ಹೆಸರಿಗಷ್ಟೇ ಹೆದ್ದಾರಿ: ಸವಾರರಿಗೆ ಕಿರಿಕಿರಿ

Spread the love

ಕಾಗವಾಡ: ಇಲ್ಲಿಂದ ಅಥಣಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮುರಗುಂಡಿಯವರೆಗಿನ 40 ಕಿ.ಮೀ. ರಸ್ತೆ ಸಂಪೂರ್ಣ ಹದಗಟ್ಟಿದೆ. ರಾಷ್ಟ್ರೀಯ ಹೆದ್ದಾರಿಯಾಗಿ ಇದು ಮೇಲ್ದರ್ಜೆಗೆ ಏರಿದ್ದರೂ, ಕಿರಿದಾಗಿರುವ ಕಾರಣ ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸುವಂತಾಗಿದೆ.

ಕಾಗವಾಡ | ಹೆಸರಿಗಷ್ಟೇ ಹೆದ್ದಾರಿ: ಸವಾರರಿಗೆ ಕಿರಿಕಿರಿ

ವಿಜಯಪುರದಿಂದ ಬೆಳಗಾವಿ, ಮಹಾರಾಷ್ಟ್ರದ ಮೀರಜ್‌, ಸಾಂಗ್ಲಿ, ಕೊಲ್ಹಾಪುರಕ್ಕೆ ಜನರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ವಿಶೇಷವಾಗಿ ಆಸ್ಪತ್ರೆಗೆ ತೆರಳಲು ಮತ್ತು ವ್ಯಾಪಾರಕ್ಕೆ ಹೋಗಲು ಈ ರಸ್ತೆಯೇ ಆಸರೆ. ಆದರೆ, ಹಾಳಾದ ರಸ್ತೆ ಸುಧಾರಣೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ವಹಿಸದ್ದರಿಂದ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ಇಕ್ಕಟ್ಟಾದ ರಸ್ತೆಯಿಂದ ವಾಹನ ಪಕ್ಕಕ್ಕೆ ಇಳಿದರೆ, ಮತ್ತೆ ರಸ್ತೆಗೇರಲು ಹರಸಾಹಸ ಪಡಬೇಕು. ಗುಂಡಿಗಳಿಂದ ತುಂಬಿದ ರಸ್ತೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಕಾಗವಾಡ ಬಸ್ ನಿಲ್ದಾಣ, ಲೋಕೂರ, ಮಂಗಸೂಳಿ, ನವಲಿಹಾಳ ಬಳಿಯಂತೂ ರಸ್ತೆ ಹೇಳತೀರದಷ್ಟು ಕೆಟ್ಟಿದೆ.

 

ಮಳೆಯಾದರೆ ರಸ್ತೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಲ್ಲುವ ಕಾರಣ, ಸಂಚಾರಕ್ಕೆ ತೊಡಕಾಗಿದೆ. ಈ ಮಾರ್ಗದಲ್ಲಿ ಸಂಚರಿಸುವಾಗ ಹಲವರು ನಿಯಂತ್ರಣ ತಪ್ಪಿ ಬಿದ್ದು, ಗಾಯಗೊಂಡ ಉದಾಹರಣೆಗಳೂ ಇವೆ.

ಆಮೆಗತಿಯಲ್ಲಿ ಕಾಮಗಾರಿ: ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಾರಿಗೆ ಸಚಿವ ನಿತಿನ್ ಗಡ್ಕರಿ 2021ರಲ್ಲೇ ಚಾಲನೆ ನೀಡಿದ್ದಾರೆ. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಸವಾರರಿಂದ ಆಕ್ಷೇಪ ವ್ಯಕ್ತವಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ