Breaking News

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Spread the love

ಧಾರವಾಡ: ಮನೆ ಹುಡುಕಿಕೊಂಡು ಅಮಾಯಕರ ಮೇಲೆ ಪ್ರಕರಣ ದಾಖಲಿಸಿರುವ ಉದಾಹರಣೆಗಳು ಇರುವಾಗ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ಗಲಭೆ ಪ್ರಕರಣ ವಾಪಸ್ ಪಡೆದಿರುವುದು ಸರ್ಕಾರದ ಸರಿಯಾದ ನಿರ್ಧಾರವೇ ಆಗಿದ್ದು, ಬಿಜೆಪಿ ಪ್ರತಿಭಟನೆ ಮಾಡಿಕೊಳ್ಳಲಿ ಅಥವಾ ಕೋರ್ಟ್‌ಗೆ ಹೋಗಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಪ್ರಕರಣವೇ ಇರಲಿ. ಇದರಲ್ಲಿ ಯಾವ ಪಕ್ಷ ಎನ್ನುವುದು ಮುಖ್ಯವಲ್ಲ, ಕಾನೂನಿನಲ್ಲಿ ಎಲ್ಲರಿಗೂ ಅವಕಾಶ ಪಡೆಯುವ ಹಕ್ಕಿದೆ. ಹೀಗಾಗಿ ಅದಕ್ಕೆ ಅವಕಾಶ ಕೊಡಬೇಕು. ಕಾನೂನಿನಲ್ಲಿ ಅವಕಾಶ ಇರುವ ಕಾರಣದಿಂದಲೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದುಕೊಳ್ಳಲಾಗಿದೆ. ಇದು ತಪ್ಪು ಎನ್ನಲಾಗದು ಎಂದರು.

ಬಿಜೆಪಿ ಮೇಲೆ ಶೇ.29ರಷ್ಟು ಪ್ರಕರಣ

ಮುಡಾ ವಿಚಾರದಲ್ಲಿ ಬಿಜೆಪಿ ನಾಯಕರು ಪಾದಯಾತ್ರೆ ಮಾಡಿದರು. ಇದೇ ಬಿಜೆಪಿಯವರ ಮೇಲೆ ಎಷ್ಟು ಎಫ್‌ಐಆರ್ ಇದೇ ನೋಡಿಕೊಳ್ಳಲಿ. ಕೇಂದ್ರ ಸಚಿವರಗಳ ಮೇಲೆ ಶೇ.೩೯ ರಷ್ಟು ಪ್ರಕರಣಗಳಿದ್ದು, ಅವರನ್ನು ಒಳಗಡೆ ಹಾಕಬೇಕಿತ್ತು. ಅವರಿಂದ ರಾಜೀನಾಮೆ ಕೇಳಬೇಕಿತ್ತು. ಯಾರು ಮುಡಾ ವಿಚಾರವಾಗಿ ಪಾದಯಾತ್ರೆ ಮಾಡಿದರೋ ಅವರು ತಮ್ಮ ಚುನಾವಣೆಯಲ್ಲಿ ಸಲ್ಲಿಸಿರುವ ಅಫಿಡೇವಿಟ್ ತೆರೆದು ನೋಡಿಕೊಳ್ಳಲಿ ಎಂದರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ