Breaking News

ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

Spread the love

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್‌ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತ್ತುಗೊಂಡಿದ್ದಾರೆ.

ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಎನ್ನುವರು ಅಮಾನತ್ತುಗೊಂಡಿದ್ದಾರೆ.

ಕರ್ತವ್ಯ ಲೋಪದಡಿ ಅಮಾನತು ಮಾಡಿ ಶನಿವಾರ (ಅ.19) ಆದೇಶ ಹೊರಡಿಸಲಾಗಿದೆ.‌

ಅಮಾನತ್ತು ಮಾಹಿತಿಯನ್ನು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧಿಕ್ಷಕಿ ಡಾ.ಅನಿತಾ ಆರ್. ನೀಡಿದ್ದಾರೆ.

ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಐಷಾರಾಮಿ ಜೀವನ ಬಗ್ಗೆ ಜತೆಗೆ ಹನಿಟ್ಯ್ರಾಪ್ ಕುರಿತಾದ ವರದಿಗಳು ಪ್ರಕಟವಾದ ನಂತರ ಬಂಧಿಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದರು.‌ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಯಂತೆ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ