ಹಾವೇರಿ: ಉಪ ಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗುತ್ತದೆ. ಶಿಗ್ಗಾವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಸೋಮವಾರ (ಅ.21) ಸಂಜೆಯೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಸಚಿವ ಎಚ್. ಕೆ.ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ತತ್ವ ಸಿದ್ಧಾಂತಗಳನ್ನ ಬಿಡುವುದಿಲ್ಲ. ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳ ಬಳಿ ಮಾತಾಡಿ ಅಂತಿಮ ಮಾಡುತ್ತೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು, ಶಾಸಕರ ಅಭಿಪ್ರಾಯ ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದರು.
ಶಿಗ್ಗಾವಿಯಲ್ಲಿ ಟಿಕೆಟ್ ಬದಲಾವಣೆ ಆಗುತ್ತದೆ ಎಂದು ಹೇಳಲಾಗುವುದಿಲ್ಲ. ಕಾಂಗ್ರೆಸ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯುವುದಿಲ್ಲ. ರಾಜಕಾರಣದಲ್ಲಿ ಸಾಪ್ಟ್, ಹಾರ್ಡ್ ರಾಜಕಾರಣ ಕಾಂಗ್ರೆಸ್ ನಲ್ಲಿಲ್ಲ. ಉಪಚುನಾವಣೆ ಡಿಕೆಶಿ, ಸಿದ್ದರಾಮಯ್ಯನವರ ನಾಯಕತ್ವ ಕ್ರಿಯಾಶೀಲವಾಗಿದೆ ಎಂದು ತೋರಿಸುತ್ತದೆ. ಮೂಡಾ ಪ್ರಕರಣದಲ್ಲಾದ ರಾಜಕಾರಣ ಬಗ್ಗೆ ಜನರು ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದರು.
Laxmi News 24×7