Breaking News

ಭಾರಿ ಮಳೆ ನೆಲಕ್ಕುರುಳಿದ ಭತ್ತದ ಪೈರು

Spread the love

ಮುಂಡರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಂಗಳವಾರ ಬೆಳಗಿನ ಜಾವ ಭಾರಿ ಮಳೆ ಸುರಿದಿದ್ದು, ಮಳೆ ಹಾಗೂ ಗಾಳಿಯ ರಭಸಕ್ಕೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕೊಯ್ಲಿಗೆ ಬಂದಿದ್ದ ಪೈರು ನೆಲಕಚ್ಚಿದೆ.

ಭಾರಿ ಗಾಳಿ ಬೀಸಿದ್ದರಿಂದ ತಾಲ್ಲೂಕಿನ ಹೆಸರೂರು, ಕಕ್ಕೂರು, ಕೊರ್ಲಹಳ್ಳಿ, ಗಂಗಾಪುರ, ಶೀರನಹಳ್ಳಿ, ಶಿಂಗಟಾಲೂರ, ಹಮ್ಮಿಗಿ, ಬಿದರಳ್ಳಿ ಮೊದಲಾದ ನದಿ ದಂಡೆಗಳ ಗ್ರಾಮಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಪೈರು ನೆಲಕ್ಕುರುಳಿದೆ.

 

ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆದಿದ್ದು, ಬಹುತೇಕ ಗ್ರಾಮಗಳಲ್ಲಿ ಮೆಕ್ಕೆಜೋಳ ಕೊಯ್ಲಿಗೆ ಬಂದಿದೆ. ಕೆಲವು ಗ್ರಾಮಗಳಲ್ಲಿ ರೈತರು ಮೆಕ್ಕೆಜೋಳ ಕೊಯ್ಲು ಮಾಡಿದ್ದಾರೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೆಕ್ಕೆಜೋಳದ ಒಕ್ಕಲು ಕಾರ್ಯಕ್ಕೆ ತೀವ್ರ ತೊಂದರೆಯಾಗಿದ್ದು, ರೈತರು ಪರದಾಡುವಂತಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ