Breaking News

ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

Spread the love

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ನಡೆದ ದುರ್ಘ‌ಟನೆಯಲ್ಲಿ ಕಾಣೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಗಂಗೇಕೊಳ್ಳದ ಲೋಕೇಶ್‌ ನಾಯ್ಕ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರ ಸಮ್ಮತಿಸಿದೆ.

ಶವ ಸಿಗದ್ದಿದ್ದರೂ ಪರಿಹಾರ ನೀಡಲು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲು ಜಿಲ್ಲಾಡಳಿತದಿಂದ ಮುಖ್ಯ ಕಾರ್ಯ

ದರ್ಶಿಗೆ ಪತ್ರ ಬರೆಯಲಾಗಿತ್ತು. ಕಾಣೆಯಾದ ಇಬ್ಬರು ದುರಂತ ನಡೆದ ಸ್ಥಳದಲ್ಲೇ ಇದ್ದರು. ಅವರು ಕಾಣೆಯಾಗಿರುವುದು ಖಚಿತ ಎಂದು ಪೊಲೀಸ್‌ ಮೂಲಗಳು ದೃಢಪಡಿಸಿವೆ.

ಹಾಗಾಗಿ ವಾರಾಂತ್ಯದಲ್ಲಿ ಜಗನ್ನಾಥ ನಾಯ್ಕ ಹಾಗೂ ಲೋಕೇಶ್‌ ನಾಯ್ಕ ಕುಟುಂಬಗಳಿಗೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಉದಯವಾಣಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ