Breaking News

ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಬಾಗಿಲು ಓಪನ್

Spread the love

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

 

ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ