Breaking News

ಬೆಂಗಳೂರು ಕಟ್ಟಡ ಕುಸಿತ’ ಪ್ರಕರಣ : ಮೃತ 8 ಜನರ ಕುಟುಂಬಕ್ಕೆ ತಲಾ ‘2 ಲಕ್ಷ’ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!

Spread the love

ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ.

ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಸಂಭವಿಸಿತ್ತು. ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದಿದ್ದಾರೆ. ನಿರ್ಮಾಣ ಹಂತದಲ್ಲಿರುವಾಗಲೇ ಕಟ್ಟಡ ಕುಸಿದಿದ್ದು, ಸದ್ಯ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರನನ್ನು ಪೊಲೀಸರು ಬಂಧಿಸಿದ್ದಾರೆ


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ