Breaking News

ಜನಾಕರ್ಷಿಸಿದ ಚನ್ನಮ್ಮನ ಕಿತ್ತೂರು ದೋಣಿ ವಿಹಾರ

Spread the love

ಕಿತ್ತೂರು: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಾಹಸ ಅಕಾಡೆಮಿ ಆಶ್ರಯದಲ್ಲಿ ತುಂಬುಗೆರೆಯಲ್ಲಿ ಬುಧವಾರ ನಡೆದ ದೋಣಿ ವಿಹಾರ ಜನಾಕರ್ಷಿಸಿತು.

ಸುಡು ಬಿಸಿಲಿನ ನಡುವೆ ಕೆರೆಯತ್ತ ಬಂದ ಜನ ತುಂಬುಕೆರೆಯ ದೋಣಿ ವಿಹಾರದಲ್ಲಿ ಕೆಲಹೊತ್ತು ನಲಿದರು.

ದಶಕಗಳಿಂದ ನೀರು ಕಾಣದ ಐತಿಹಾಸಿಕ ಕೆರೆ ಈ ವರ್ಷ ಸುರಿದ ಭಾರಿ ಮಳೆಯಿಂದ ಮೈ ತುಂಬಿ ಹರಿಯುತ್ತಿರುವುದನ್ನು ಕಂಡು ಸಂಭ್ರಮಿಸಿದರು.

ಬ್ರಿಟಿಷರ ವಿರುದ್ಧ ಸಾಧಿಸಿದ ಜಯದ 200ನೇ ವರ್ಷಾಚರಣೆ ಅಂಗವಾಗಿ 15 ವರ್ಷಗಳ ಬಳಿಕ ಮತ್ತೆ ದೋಣಿ ವಿಹಾರ ನಡೆದದ್ದು ಉತ್ಸವದ ಸೊಬಗು ಹೆಚ್ಚಿಸಿತು. ತಂಡೋಪ ತಂಡವಾಗಿ ಬಂದ ಜನರು ನೀರಿನಲ್ಲಿ ತೇಲಿ ತಂಪಾದರು. ಜಲ ಸಾಹಸ ಮಾಡಿ ಖುಷಿ ಪಟ್ಟರು. ಇದು ಕಿತ್ತೂರು ಉತ್ಸವದ ಆಕರ್ಷಣೆ ಹಾಗೂ ಜನರ ಮನರಂಜನೆಗೆ ಒಳಗಾಯಿತು. ಇದೇ ವೇಳೆ ಜನ ಸಾಮಾನ್ಯರಿಗೂ ದೋಣಿ ವಿಹಾರ ಮಾಡಲು ಅನುಕೂಲವಾಗುವಂತೆ ದರ ನಿಗದಿ ಮಾಡಿ ಸುರಕ್ಷತೆಗೆ ಬೇಕಾಗುವ ಸಲಕರಣೆಗಳನ್ನು ಕಡ್ಡಾಯವಾಗಿ ಇಟ್ಟುಕೊಂಡು ವಿಹಾರಿಗಳಿಗೆ ವಿತರಿಸಬೇಕೆಂಬ ಮಾತುಗಳು ನಾಗರಿಕರಿಂದ ಕೇಳಿ ಬಂದವು.

ಜಿಲ್ಲಾ ಉತ್ತುವಾರಿ ಸಚಿವ ಸತೀಶ ಜಾರಕಿಹೊಳಿ ದೋಣಿ ವಿಹಾರ ಉದ್ಘಾಟಿಸಿ ಮಾತನಾಡಿ, ‘ಸರ್ಕಾರ ಮನರಂಜನೆ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿದೆ. ಉತ್ಸವದಲ್ಲಿ ಮೂರು ದಿನಗಳಕಾಲ ವಿವಿಧ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಕ್ರೀಡಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೀಕ್ಷಣೆ ಮಾಡಿ ಕ್ರೀಡಾ ಮನೋಭಾವ ಮೆರೆಯಬೇಕು’ ಎಂದರು.

ಶಾಸಕರಾದ ಬಾಬಾಸಾಹೇಬ ಪಾಟೀಲ, ಮಹಾಂತೇಶ ಕೌಜಲಗಿ, ಆಸಿಫ್‌ ಶೇಠ್‌, ಜಿಲ್ಲಾಧಿಕಾರಿ ಮಹಮ್ಮದ್‌ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅನೇಕರು ಇದ್ದರು.


Spread the love

About Laxminews 24x7

Check Also

ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.

Spread the loveಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ