Breaking News

ಟ್ರ್ಯಾಕ್ಟರ್ ಅಡ್ಡ ಬಂದಿದ್ದಕ್ಕೆ ಡಿವೈಡರ್‌ಗೆ ಹಾರಿದ ಬಸ್

Spread the love

ಹಾಸನ: ಒಮ್ಮೆಲೆ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಜಿಲ್ಲೆಯ ಶಾಂತಿಗ್ರಾಮ ಬಳಿ ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ಕೆಎಸ್‍ಆರ್ ಟಿಸಿ ಬಸ್‍ಗೆ ಇದ್ದಕ್ಕಿದ್ದಂತೆ ಟ್ರ್ಯಾಕ್ಟರ್ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈವರ್ ಮೇಲೆ ಹತ್ತಿದೆ. ಬಸ್ ಡಿವೈಡರ್ ದಾಟಿ ಹೋಗದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಡ್ರೈವರ್ ಹಾಗೂ ಕಂಡಕ್ಟರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನಿಡಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಂಚಾರವನ್ನು ಸುಗಮಗೊಳಿಸಿದ್ದಾರೆ.


Spread the love

About Laxminews 24x7

Check Also

ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ

Spread the love ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ