Breaking News

ನಾವು ಗೆಲುವಿನ ಅಂತರ ನೋಡುತ್ತಿಲ್ಲ, ಗೆಲುವು ಮಾತ್ರ ನೋಡುತ್ತಿದ್ದೇವೆ : ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ

Spread the love

ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಇಂದು ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಅವರು ಮಾತನಾಡಿ, ನಾವು ಗೆಲುವಿನ ಅಂತರ ನೋಡುತ್ತಿಲ್ಲ.

ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ತಿಳಿಸಿದರು.

ಈ ಬಾರಿ ಶಿಗ್ಗಾವಿಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ನೀಡಿದರು.ಯಾಸಿರ್ ಪಠಾಣ್ ಕೂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಬಹಳ ಮಾತನಾಡಿದ್ದರು. 3 ಲಕ್ಷ 4 ಲಕ್ಷ ಲೀಡ್ ನಿಂದ ಗೆಲ್ಲುತ್ತೇವೆ ಅಂದರು ಏನಾಯ್ತು? ಎಂದರು.

ಗ್ಯಾರಂಟಿ ಯೋಜನೆಗಳಿಂದಾಗಿ 9 ಸೀಟುಗಳನ್ನು ನಾವು ಗೆದ್ದಿದ್ದೇವೆ. ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದವರು ಬಿಜೆಪಿಯವರು.ಈಗ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ. ನಾವು ಗೆಲುವಿನ ಅಂತರ ನೋಡುತ್ತಿಲ್ಲ ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ತಿಳಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ