Breaking News

ಗಾಂಜಾ, ಡ್ರಗ್ಸ್‌ ಮಾರಾಟ ಜಾಲಕ್ಕೆ ಅಂಕುಶ: ಪರಮೇಶ್ವರ

Spread the love

ಶಿವಮೊಗ್ಗ: ‘ರಾಜ್ಯದಲ್ಲಿ ಗಾಂಜಾ, ಡ್ರಗ್ಸ್‌ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಸಂಪೂರ್ಣ ಅಂಕುಶ ಹಾಕಿ ಅದನ್ನು ಬುಡಸಮೇತ ಕಿತ್ತು ಹಾಕುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

‘ಬೆಂಗಳೂರಿನಲ್ಲಿ ಶುಕ್ರವಾರ ₹1.50 ಕೋಟಿ ಮೌಲ್ಯದ ಗಾಂಜಾ ವಶ‍ಪಡಿಸಿಕೊಂಡು ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ.

ವಾರದ ಹಿಂದೆ ₹ 5 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದರೆ ಆಯಾ ಠಾಣಾ ವ್ಯಾಪ್ತಿಯ ಅಧಿಕಾರಿಗಳು, ಎಸ್ಪಿ ಹಾಗೂ ಡಿಸಿಪಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಸುದ್ದಿಗಾರರಿಗೆ ಶನಿವಾರ ತಿಳಿಸಿದರು.

‘ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದಿಲ್ಲ. ಜಾತಿ ಗಣತಿ ವರದಿಯನ್ನು ಮೊದಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸುತ್ತೇವೆ. ಆಮೇಲೆ ಅದರ ಜಾರಿ ಕುರಿತು ನೋಡೋಣ’ ಎಂದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ