Breaking News

ಚಿಕ್ಕೋಡಿ | ಯಮನವ್ವಗೆ ಸುವರ್ಣ ಕರ್ನಾಟಕ ಪ್ರಶಸ್ತಿ

Spread the love

ಚಿಕ್ಕೋಡಿ: ತಾಲ್ಲೂಕಿನ ಧುಳಗನವಾಡಿ ಗ್ರಾಮದ ಹಿರಿಯ ಬಯಲಾಟ ಕಲಾವಿದೆ ಯಮನವ್ವಾ ಕಲಾಚಂದ್ರ(86) ಅವರ ಕಲೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಯಮನವ್ವಾ ಅವರು ವಿವಿಧ ಕಲಾ ಪ್ರಕಾರಗಳಲ್ಲಿ 6 ದಶಕಗಳಿಂದ ಕಲಾಸೇವೆ ಸಲ್ಲಿಸಿದ್ದಾರೆ.

2015-16ನೇ ಸಾಲಿನಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಪ್ರಶಸ್ತಿ ಪಡೆದುಕೊಂಡ ಅವರಿಗೆ ಸುವರ್ಣ ಕರ್ನಾಟಕದ ಸಂಭ್ರಮದಲ್ಲಿ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದ್ದು ಚಿಕ್ಕೋಡಿ ಭಾಗದ ಕಲಾವಿದರಿಗೆ ಸ್ಪೂರ್ತಿ ತಂದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ