Breaking News

ರಿವಾಲ್ವರ್ ಇಟ್ಟುಕೊಂಡ ಆಂಜನೇಯ

Spread the love

ಚಿಕ್ಕೋಡಿ: ದೇವರ ಆಯುಧಗಳು ಎಂದರೆ, ಗದೆ, ಬಿಲ್ಲು, ಖಡ್ಗ, ತ್ರಿಶೂಲ, ಶಂಖ, ಚಕ್ರ ನೋಡಿರುತ್ತೀರಿ. ಆದರೆ, ಪಿಸ್ತೂಲ್‌ ಅನ್ನೇ ಆಯುಧವಾಗಿಸಿಕೊಂಡ ದೇವರನ್ನು ನೋಡಬೇಕಾದರೆ ತಾಲ್ಲೂಕಿನ ಜಾಗನೂರಿಗೆ ಬರಬೇಕು.

ಇಲ್ಲಿನ ಆಂಜನೇಯ ತನ್ನ ಸೊಂಟಕ್ಕೆ ಪಿಸ್ತೂಲ್ ಇಟ್ಟುಕೊಂಡಿರುವುದು ಕಂಡುಬರುತ್ತದೆ.

ಜಾತ್ರೆ, ಉತ್ಸವ, ಹನುಮ ಜಯಂತಿ, ರಾಮನವಮಿ ಸೇರಿ ವಿಶೇಷ ಸಂದರ್ಭ ಹನುಮಾನ ದೇವರ ಮೂರ್ತಿ ಅಲಂಕರಿಸುವಾಗ, ಪಿಸ್ತೂಲ್ ಇರಿಸುವ ಪರಿಪಾಠ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.

ದೀಪಾವಳಿ ಪ್ರಯುಕ್ತ ನ.1, 2ರಂದು ವೈಭವದಿಂದ ನೆರವೇರಲಿರುವ ಹನುಮಾನ ದೇವರ ಜಾತ್ರೆಗೆ ಜಾಗನೂರ ಗ್ರಾಮ ಸಜ್ಜಾಗಿದೆ. ಆಂಜನೇಯನ ಸೊಂಟದಲ್ಲಿ ಪಿಸ್ತೂಲ್ ರಾರಾಜಿಸುತ್ತಿದೆ. ಜಾಗನೂರ ಹಾಗೂ ಸುತ್ತಲಿನ ಗ್ರಾಮಗಳಿಗೆ ‘ಜಾಗೃತ ದೇವಸ್ಥಾನ’ ಎಂದೇ ಇದು ಖ್ಯಾತಿ ಗಳಿಸಿದೆ.


Spread the love

About Laxminews 24x7

Check Also

ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ

Spread the loveಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್‌ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ