Breaking News

ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ದುಡ್ಡು ಹೊಡೆದಿದ್ದಾರೆ : ಯತ್ನಾಳ್ ಸ್ಪೋಟಕ ಆರೋಪ!

Spread the love

ವಿಜಯಪುರ : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಮಾಡಿದ್ದು, ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂಪಾಯಿ ದುಡ್ಡು ತಿಂದಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ.

 

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಸಿಎಂ ಇದ್ದಾಗ ಮಂತ್ರಿಯಾಗು ಎಂದಿದ್ದರು ಆದರೆ ನಾನು ಆಗಿರಲಿಲ್ಲ. ಅವರು ಸಿಎಂ ಇದ್ದಾಗ ಸಾವಿರಾರು ಕೋಟಿ ರೂ. ಹಣ ತಿಂದಿದ್ದಾರೆ. ಭ್ರಷ್ಟ ಸಿಎಂ ಮಂತ್ರಿಮಂಡಲದಲ್ಲಿ ನಾನು ಇರಲ್ಲ ಎಂದು ತಿರಸ್ಕರಿಸಿದ್ದೇನೆ. ಪ್ರತಿ ನಿತ್ಯ ಅಪ್ಪ, ಮಗ ನಡ್ಡಾ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ತೆಗೆಯಿರಿ. ವಿಜಯೇಂದ್ರನನ್ನು ಸಿಎಂ ಮಾಡಿ ಎಂದು ಗೋಳಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ವಿಜಯೇಂದ್ರ ನನ್ನನ್ನು ಸ್ಟಾರ್ ಮಾಡುವ ಅವಶ್ಯಕತೆಯಿಲ್ಲ. ಈ ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ. ನೀವು ಹೀರೋ ಆಗಬೇಕು ಅಂದರೆ ಖರ್ಚು ಮಾಡಿ.ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನ ತೆರವುಗೊಳಿಸಬೇಕು. ಬಿ.ಎಸ್ ಯಡಿಯೂರಪ್ಪ ಅವರನ್ನ ಯಾವುದೇ ವೇದಿಕೆಗಳಲ್ಲಿ ಕೂರಿಸಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ