Breaking News

ಬಿಜೆಪಿ ಅಧೋಗತಿಗೆ ತಳ್ಳಿದ್ದ ಸಾರಿಗೆ ನಿಗಮಗಳಿಗೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ

Spread the love

ಬೆಂಗಳೂರು, ನವೆಂಬರ್ 02: ಶಕ್ತಿ ಯೋಜನೆ ಮರು ಪರಿಶೀಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ರಾಜ್ಯಾದ್ಯಂತೆ ಶಕ್ತಿ ಯೋಜನೆ ಕಿಡಿ ಹೊತ್ತಿಕೊಂಡಿದೆ. ಆರೋಪ, ಪ್ರತ್ಯಾರೋಪಗಳ ಮಧ್ಯೆ ಸವಾಲೆಸೆಯುವುದು, ಬಹಿರಂಗ ಚರ್ಚೆಗೆ ಆಹ್ವಾನ ನಡೆದಿದೆ.

ಈ ಮಧ್ಯೆ ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

ಟ್ವೀಟ್ ಮೂಲಕ ಕಿರಿ ಕಾರಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಆರ್.ಅಶೋಕ್ ಅವರೆ ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.

ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ಬಿಜೆಪಿಯವರಂತೆ ನಾವು ಗಾಳಿಯಲ್ಲಿ ಗುಂಡು ಹಾರಿಸುವುದಿಲ್ಲ. ಕಾಂಗ್ರೆಸ್ ಅಭಿವೃದ್ಧಿಗೆ ಸಾಧನೆಗೆ ಅಂಕಿಅಂಶಗಳು ಇವೆ ಎಂದು ವಿವರಿಸಿದ್ದರೆ.

ಬಿಜೆಪಿ ಅಧಿಕಾರಾವಧಿಯಲ್ಲಿಯೇ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಲುಪಿವೆ. ಈ ಕಟು ಸತ್ಯ ನಿಮಗೆ‌ ತಿಳಿದಿದ್ದರೂ ಸಹ ಜಾಣ ಕುರುಡು ತೋರುವ ನಿಮ್ಮ ಬಗ್ಗೆ ನನಗೆ ಕನಿಕರವಿದೆ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಯಾವ ಸಾಧನೆಗಳನ್ನು ಮಾಡಿದ್ದೀರಾ? ಬೇಕಿದ್ದರೆ ಹೇಳಿ ಆ ಬಗ್ಗೆ ಚರ್ಚೆಗೆ ನಾವು ಸಿದ್ಧ ಎಂದು ಅವರು ಸವಾಲೆಸಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ