Breaking News

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರವಾದ ‘ಗೃಹಲಕ್ಷ್ಮಿ’ ಯೋಜನೆ

Spread the love

ಬೆಳಗಾವಿ, ನವೆಂಬರ್ 03: ಕರ್ನಾಟಕದ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ‘ಗೃಹಲಕ್ಷ್ಮಿ’ ಯೋಜನೆಯೂ ಒಂದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದು ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿದೆ. ಯೋಜನೆಯ ನೆರವಿನೊಂದಿಗೆ ಹಲವು ಮಹಿಳೆಯರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ.

ಈಗ ಇಂತಹ ಯಶಸ್ಸಿನ ಸುದ್ದಿಯೊಂದು ಬೆಳಗಾವಿ ಜಿಲ್ಲೆಯಿಂದ ಬಂದಿದೆ.

ಬೆಳಗಾವಿ ಜಿಲ್ಲೆಯ ಕುಕಡೊಳ್ಳಿ ಗ್ರಾಮದ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು, ಮಿರ್ಚಿ ಮಿಕ್ಸರ್ ಮೆಷಿನ್ (ಖಾರದ ಗಿರಣಿ) ಕೊಂಡು ಹೊಸ ಉದ್ಯಮ ಆರಂಭಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳೆಗೆ ಶುಭ ಕೋರಿ, ನೂತನ ಉದ್ಯಮಕ್ಕೆ ಚಾಲನೆ ನೀಡಿದರು.

ಈ ಕುರಿತು ಪೋಸ್ಟ್ ಹಾಕಿರುವ ಸಚಿವರು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರವಾದ ‘ಗೃಹಲಕ್ಷ್ಮಿ’ ಯೋಜನೆ ಎಂದು ಹೇಳಿದ್ದಾರೆ. ‘ಕುಕಡೊಳ್ಳಿ ಗ್ರಾಮದ ಶ್ರೀಮತಿ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣ ಕೂಡಿಟ್ಟು, ಮಿರ್ಚಿ ಮಿಕ್ಸರ್ ಮಷಿನ್ (ಖಾರದ ಗಿರಣಿ) ಕೊಂಡಿರುವ ಹಿನ್ನೆಲೆಯಲ್ಲಿ ಇಂದು ಮಿರ್ಚಿ ಮಿಕ್ಸರ್ ಮಷಿನ್ ನ್ನು ಉದ್ಘಾಟಿಸಿ, ಮಹಿಳೆಯ ನೂತನ ಉದ್ಯೋಗಕ್ಕೆ ಶುಭ ಕೋರಿದೆ’ ಎಂದು ಸಚಿವರು ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ