Breaking News
Home / ರಾಜ್ಯ / ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ವಿಶೇಷ ಪೂಜೆ

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ವಿಶೇಷ ಪೂಜೆ

Spread the love

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಕೃಷಿಕರ ಹೋರಾಟ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಗುರುದ್ವಾರ ವ್ಯವಸ್ಥಪನಾ ಮಂಡಳಿ ಮಂಜಿಂದರ್ ಸಿಂಗ್ ತಿಳಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರಿಗೆ ಹೋಲಿಸಿರುವ ಬಿಜೆಪಿ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿರುವ ಸಿಂಗ್ ಅವರು ಪ್ರತಿಭಟನೆ ನಡೆಸುತ್ತಿರುವ ರೈತನ ಮಗನೊಬ್ಬ ಕಾಶ್ಮೀರದಲ್ಲಿ ಹುತಾತ್ಮನಾಗಿದ್ದಾನೆ. ಅಂತಹ ಮಹಾನ್ ವ್ಯಕ್ತಿಗಳನ್ನು ಉಗ್ರರು ಎಂದು ಕರೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 6ನೆ ದಿನಕ್ಕೆ ಕಾಲಿಟ್ಟಿದೆ. ಆದರೂ ರೈತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲಾದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಮನ್ ಕೀ ಬಾತ್ ಆಲಿಸಬೇಕು ಎಂದು ಸಿಂಗ್ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ