Home / ಜಿಲ್ಲೆ / ಬೆಂಗಳೂರು / ಯೋಗೇಶ್ವರ್ ಅವರನ್ನು ಮಂತ್ರಿ ಮಾಡೇ ಮಾಡ್ತೀವಿ : ಸಿಎಂ ಬಿಎಸ್‍ವೈ

ಯೋಗೇಶ್ವರ್ ಅವರನ್ನು ಮಂತ್ರಿ ಮಾಡೇ ಮಾಡ್ತೀವಿ : ಸಿಎಂ ಬಿಎಸ್‍ವೈ

Spread the love

ಬೆಂಗಳೂರು, ಡಿ.1- ಕೆಲವು ಶಾಸಕರ ವಿರೋಧದ ನಡುವೆಯೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಬಿಜೆಪಿಯೊಳಗೆ ಕೆಲವು ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸ್ವತಃ ಸಿಎಂ ಅವರೇ ನೂರಕ್ಕೆ ನೂರರಷ್ಟು ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.

ವಿಧಾನಸೌಧ ನಿರ್ಮಾತೃ ದಿ.ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ನಿಮ್ಮ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಅವರು(ಯೋಗೇಶ್ವರ್) ಸಂಪುಟಕ್ಕೆ ಬರುವುದು ಖಚಿತ ಎಂದು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ಯೋಗೇಶ್ವರ್ ಇತ್ತೀಚೆಗೆ ವಿಧಾನಪರಿಷತ್‍ಗೆ ನಾಮಕರಣಗೊಂಡಿದ್ದರು. ಚುನಾವಣೆಯಲ್ಲಿ ಸೋತಿರುವವರನ್ನು ಸಂಪುಟಕ್ಕೆ ತೆಗೆದುಕೊಳ್ಳಬಾರದು ಎಂದು ಬಿಜೆಪಿಯ ಒಂದ ಬಣ ಆಗ್ರಹಿಸಿತ್ತು.

ಈಗಾಗಲೇ ಲಕ್ಷ್ಮಣಸವದಿಯನ್ನು ಡಿಸಿಎಂ ಮಾಡಿರುವುದೇ ಸಾಕು. ಮತ್ತೆ ಸೋತವರಿಗೆ ಮಣೆ ಹಾಕುವುದು ಬೇಡ ಎಂದು ಸಚಿವ ಸ್ಥಾನದ ಮೇಲೆ ಆಕಾಂಕ್ಷಿಗಳು ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿತರರ ಮೇಲೆ ಒತ್ತಡ ಹಾಕಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ