Breaking News

ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

Spread the love

ಬೆಳಗಾವಿ: ತಹಶೀಲ್ದಾರ್‌ ಕಚೇರಿಯಲ್ಲೇ ಎಸ್‌ಡಿಎ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಮನೆಯಲ್ಲಿ ಇಟ್ಟು ಹೋಗಿದ್ದ ರುದ್ರಣ್ಣ ಮೊಬೈಲ್‌ ಪತ್ತೆಯಾಗಿದ್ದು, ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಕೆಮೆರಾಗಳ ದೃಶ್ಯಗಳನ್ನು ಮಂಗಳವಾರ ರಾತ್ರಿಯವರೆಗೂ ಪೊಲೀಸರು ಕಲೆ ಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ 6.38ಕ್ಕೆ ರುದ್ರಣ್ಣ ಕಚೇರಿಗೆ ಬಂದಿರುವುದು ಸೆರೆಯಾಗಿದೆ.

ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆ ತಹಶೀಲ್ದಾರ್‌ ಬಸವರಾಜ ನಾಗರಾಳ ಕಚೇರಿಗೆ ಬಂದು ನೋಡಿ ಹೋದವರು ಅನಂತರ ತಲೆಮರೆಸಿಕೊಂಡಿದ್ದಾರೆ.

ಬುಧವಾರ ಸಂಜೆ ತಹಶೀಲ್ದಾರ್‌ ಕಚೇರಿ ಬಳಿ ವಾಹನ ನಿಂತಿದೆ. ಸಚಿವರ ಆಪ್ತ ಸಹಾಯಕ ಸೋಮು ದೊಡವಾಡಿ ಹಾಗೂ ಅಶೋಕ ಕಬ್ಬಿಲಿಗೇರ ಕೂಡ ನಾಪತ್ತೆಯಾಗಿದ್ದಾರೆ.

ಆತ್ಮಹತ್ಯೆ ಮುನ್ನ ದಿನ ರುದ್ರಣ್ಣ ಕಚೇರಿಯ ಎಲ್ಲ ಸಿಬಂದಿ ವಾಟ್ಸ್‌ಆಪ್‌ ಗ್ರೂಪ್‌ನಲ್ಲಿಯೇ ಡೆತ್‌ನೋಟ್‌ ಕಳುಹಿಸಿ, ಕೆಲವು ಸಹೋದ್ಯೋಗಿಗಳಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಆತ್ಮಹತ್ಯೆಯ ಸುಳಿವು ಕೊಟ್ಟಿದ್ದರು ಎನ್ನಲಾಗಿದೆ.

 


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ