Breaking News

ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Spread the love

ಲಬುರಗಿ: ವಕ್ಪ್ ತೆಗಿಯಬೇಕೆಂದು ಬಿಜೆಪಿಯವರು ಹೇಳ್ತಾರಲ್ಲ‌, ಒಂದೂವರೆ ವರ್ಷದ ಹಿಂದೆ ಬಿಜೆಪಿ ಸರ್ಕಾರವೇ ಇತ್ತು. ಆಗ ಇವರು ಕತ್ತೆ ಕಾಯುತ್ತಿದ್ದರಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಇದೆಲ್ಲಾ ನೆನಪಾಗುತ್ತಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಚೆಯಿಂದಲೂ ರೈತರಿಗೆ ನೋಟಿಸ್ ಬಂದಿವೆ.

ಎಲೆಕ್ಷನ್ ಬಂದಾಗ ಇದನ್ನ ದೊಡ್ಡ ಇಶ್ಯು ಮಾಡಿದ್ದಾರೆ. ನಾಚಿಕೆಯಾಗಲ್ವಾ ನಿಮಗೆ? ವಕ್ಪ್ ಆಸ್ತಿಯನ್ನು ಜಿಐಎಸ್ ಮ್ಯಾಪ್ ಮಾಡಿಸುತ್ತಿರುವುದು ಯಾರು? ಬಿಜೆಪಿಯವರೇ ಮಾಡುತ್ತಿರುವುದು. ಇದಕ್ಕೆ ಶೋಭಾ ಕರಂದ್ಲಾಜೆ ಎನು ಹೇಳುತ್ತಾರೆ. ಅವಾಗ ಯಾಕೆ ಶೋಭಾ ಅವರು ಪ್ರತಿಭಟನೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ಜಿಐಎಸ್ ಮ್ಯಾಪಿಂಗ್ ಗೆ 330 ಕೋಟಿ ಖರ್ಚು ಮಾಡಿದ್ದು ಬಿಜೆಪಿಯ ಕೇಂದ್ರ ಸರ್ಕಾರ. ಆವಾಗ ಇವರಿಗೆ ಇದರ ಅರಿವಿತ್ತಲ್ಲ. ಈಗ್ಯಾಕೆ ಇಂತಹ ಡ್ರಾಮಾಗಳನ್ನು ಮಾಡಿ ರೈತರನ್ನು, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ವಕ್ಪ್ ಆಸ್ತಿ ಸಂರಕ್ಷಣೆಗೆ ಹಣ ಖರ್ಚು ಮಾಡಿದ್ದು ಬಿಜೆಪಿಯವರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರಕ್ಕೆ 11 ವರ್ಷವಾಯಿತು, ಇನ್ನೂ ಯಾಕ್ ಬ್ಯಾನ್ ಮಾಡಿಲ್ಲ? ಕಾಂಗ್ರೆಸ್‌ ಆಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಮಾತ್ರವೇ ನಿಮಗೆ ವಕ್ಫ್ ರದ್ದು‌ವಿಚಾರ ಹೊಳೆಯುತ್ತದೇನು ಎಂದು ಕಟುಕಿದರು.

 


Spread the love

About Laxminews 24x7

Check Also

ಏಕಾಏಕಿ ಫೀಸ್​​ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು 

Spread the loveದೇವನಹಳ್ಳಿ, ಏಪ್ರಿಲ್​ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್​​, ಪೆಟ್ರೋಲ್​, ಡಿಸೇಲ್​ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ