Breaking News

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ

Spread the love

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೈಲು ಹಳಿ ಬಳಿ ಮೃತದೇಹ ಪತ್ತೆಯಾದಾಗ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಈ ವೇಳೆ ಅದು ಕಾರ್ತಿಕ್ ಭಟ್ ಎಂಬಾತನ ಮೃತದೇಹ ಎಂಬುದು ಗೊತ್ತಾಗಿದೆ. ಹಾಗಾಗಿ ಪೊಲೀಸರು ಕಾರ್ತಿಕ್ ವಾಸವಿದ್ದ ಫ್ಲ್ಯಾಟ್ ಬಳಿ ಬಂದಿದ್ದರು.

ಈ ವೇಳೆ ಅವರ ಪತ್ನಿ ಹಾಗೂ ಮಗುವನ್ನು ಕೊಲೆಗೈದಿರುವುದು ಪತ್ತೆಯಗೈದೆ.ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ತಾನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸ್ಥಳೀಯರು ಹೇಳುವ ಪ್ರಕಾರ ಕಾರ್ತಿಕ್ ಭಟ್ ಹಾಗೂ ಕುಟುಂಬದವರು ಅನುಕೂಲಸ್ಥ ಕುಟುಂಬದವರು, ಬಹಳ ಒಳ್ಳೆಯ ವ್ಯಕ್ತಿ. ಆದರೆ ಯಾವ ಕಾರಣಕ್ಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದು ತಿಳಿದಿಲ್ಲ ಎಂದಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ