Breaking News

ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು

Spread the love

ಬೆಳಗಾವಿ:  ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ  ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ವಲಸಿಗರು ಹಾಗೂ ಮೂಲ   ಬಿಜೆಪಿಗರ ಮಧ್ಯೆ  ಯಾವುದೇ ತಿಕ್ಕಾಟವಿಲ್ಲ.  ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು.

ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ  ಮಾತನಾಡಿ, ಸದ್ಯ  ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ ಅವಧಿ ವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದ ಅವರು,  ಬೆಳಗಾವಿ ಲೋಕಸಭೆಗೆ ತಾವು ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ   ಈ ಬಗ್ಗೆ ಯಾರು ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು.


Spread the love

About Laxminews 24x7

Check Also

ಶ್ರೀಶೈಲದಿಂದ‌ ವಾಪಸ್ ಬರುವಾಗ ಕ್ರೂಸರ್ ಅಪಘಾತ ; ಬೆಳಗಾವಿ ಮೂಲದ ಮೂವರು ಸಾವು

Spread the loveಬೆಳಗಾವಿ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದುಕೊಂಡು ಮರಳಿ ಬರುವ ವೇಳೆ ಕ್ರೂಸರ್ ವಾಹನ‌ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ