Breaking News

ಹಾವೇರಿಯಲ್ಲಿ ಲೋಕಾ ದಾಳಿ ವೇಳೆ ಹೈಡ್ರಾಮ! 9 ಲಕ್ಷ ಹಣವನ್ನು ಗಂಟು ಕಟ್ಟಿ ಮನೆಯಿಂದ ಹೊರಗೆಸೆದ ಅಧಿಕಾರಿ

Spread the love

ಇಂದು ಬೆಳಗ್ಗೆ ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳಗ್ಗೆಯಿಂದ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇದರ ನಡುವೆ ಹಾವೇರಿಯ ಅಧಿಕಾರಿಯೊಬ್ಬರ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ.

 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಕಾಶೀನಾಥ ಭಜಂತ್ರಿ ಮನೆಯಲ್ಲಿ ಹೈಡ್ರಾಮ ನಡೆದಿದೆ. ಕಾಶೀನಾಥ್​ ಅವರು ಬರೋಬ್ಬರಿ 9 ಲಕ್ಷ ರೂಪಾಯಿ ಹಣವನ್ನು ಗಂಟು ಕಟ್ಟಿ, ಮನೆಯ ಕಿಟಕಿ‌ ಮೂಲಕ ಹೊರಗೆ ಬೀಸಾಡಿದ್ದಾರೆ. ಅಲ್ಲದೆ, 2 ಲಕ್ಷ ರೂ. ನಗದನ್ನು ಬೆಡ್​ನಲ್ಲಿ ಸುತ್ತಿ ಇಟ್ಟಿರುವುದು ಕಂಡುಬಂದಿದೆ.

ಹಾವೇರಿಯ ಬಸವೇಶ್ವರ ನಗರದ 1ನೇ ಕ್ರಾಸ್​ನಲ್ಲಿರುವ ಕಾಶೀನಾಥ್ ಭಜಂತ್ರಿ ನಿವಾಸದಲ್ಲಿ ಈ ಘಟನೆ ನಡೆದಿದೆ. ಕಾಶೀನಾಥ ಭಜಂತ್ರಿಯ ಹಿರೇಕೆರೂರ ಉಪ ವಿಭಾಗದ ಕಚೇರಿ, ಹಾವೇರಿ‌ನಗರದ ಏಳು ಮನೆಗಳು, ಮುಂಡಗೋಡದ ಫಾಮ್೯ ಹೌಸ್ ಮೇಲೆ ದಾಳಿ‌ ನಡೆಸಿರುವ ಲೋಕಾ ತಂಡ ಭಾರಿ ಪ್ರಮಾಣದ ಆಸ್ತಿ ಪತ್ರಗಳು, ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದೆ.ಹಾವೇರಿಯಲ್ಲಿ ಜಿಲ್ಲೆಯಲ್ಲಿ ಒಂಭತ್ತು ತಂಡಗಳಿಂದ ವಿವಿಧೆಡೆ ದಾಳಿ ನಡೆದಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಕಾಶೀನಾಥ ಭಜಂತ್ರಿ, ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಹಾಗೂ ರಾಣೆಬೆನ್ನೂರ ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ