Breaking News

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸಹಜಾನಂದ ಅವಧೂತರು

Spread the love

ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ ಎಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು.

ತಾಲ್ಲೂಕಿನ ಅಂಕಲಿ ಗ್ರಾಮದ ರುದ್ರಾವಧೂತ ಮಠದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಸ್ಕಾರದ ಕೊರತೆಯಿಂದ ಯುವಕರು ದಾರಿ ತಪ್ಪಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ.

ಇವುಗಳಿಂದ ಮುಕ್ತರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕ ಚಿಂತನೆಗಳು ಯುವಕರನ್ನು ಸನ್ಮಾರ್ಗದತ್ತ ಕರೆದುಕೊಂಡು ಹೋಗಲು ಸಾಧ್ಯ’ ಎಂದು ಹೇಳಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕೋಳಿಗುಡ್ಡದ ಸಿದ್ಧಾರೂಢ ಸ್ವಾಮೀಜಿ, ಲಿಂಗನೂರಿನ ಸ್ವಾಮೀಜಿ, ಜಮಖಂಡಿಯ ಕೃಷ್ಣಾನಂದ ಅವಧೂತರು ಮಾತನಾಡಿದರು. ಪ್ರಮುಖರಾದ ಈರಪ್ಪ ಮಾಳಗೆ, ತುಕಾರಾಂ ಕುರಣೆ, ಅನಿಲ ಬಡಿಗೇರ, ಸುಕುಮಾರ ಚಲವಾದಿ, ಪಿಂಟು ಮಾಳಗೆ, ರಾಕೇಶ ತಳಕೇರಿ ಇದ್ದರು.


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ