Breaking News

ಎಸ್‌ಡಿಎ ಆತ್ಮಹತ್ಯೆ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Spread the love

ಬೆಳಗಾವಿ: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಎಸ್‌ಡಿಎ ರುದ್ರಣ್ಣ ಯಡವನ್ಣವರ ಆತ್ಮಹತ್ಯೆ ಪ್ರಕರಣದಲ್ಲಿ, ತಹಶೀಲ್ದಾರ್‌ ಸೇರಿದಂತೆ ಮೂವರೂ ಆರೋಪಿಗಳಿಗೆ ಗುರುವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ತಹಶೀಲ್ದಾರ್‌ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಳಗಾವಿ: ಎಸ್‌ಡಿಎ ಆತ್ಮಹತ್ಯೆ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ರುದ್ರಣ್ಣ ನವೆಂಬರ್‌ 5ರಂದು ತಹಶೀಲ್ದಾರ್‌ ಕೋಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ತಮ್ಮ ಸಾವಿಗೆ ಮೂವರು ಹೊಣೆ ಎಂದು ಅವರ ಹೆಸರನ್ನು ವಾಟ್ಸ್‌ಆಯಪ್‌ ಗ್ರೂಪಿನಲ್ಲಿ ಹಾಕಿದ್ದರು. ಎಫ್‌ಐಆರ್‌ ದಾಖಲಾದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಮೂವರೂ ಪ್ರತ್ಯೇಕ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಶಿರೋಳ ಅವರು ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ