Breaking News

ಕಬ್ಬು ಕಟಾವು ಋತು: ಮಹಾರಾಷ್ಟ್ರದಲ್ಲಿ ಮತದಾನದಿಂದ 12 ಲಕ್ಷ ಮಂದಿ ವಂಚಿತ?

Spread the love

ಪುಣೆ: ನವೆಂಬರ್ 20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗದ ಸುಮಾರು 12 ಲಕ್ಷ ಮಂದಿ ಕಬ್ಬು ಕಟಾವು ಕಾರ್ಮಿಕರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ.

ನವೆಂಬರ್ 15 ರಿಂದ ಕಬ್ಬು ಕಟಾವು ಋತು ಆರಂಭವಾಗಲಿದ್ದು, ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಕಬ್ಬು ಕಟಾವು ಮಾಡುವ ಕಾರ್ಮಿಕರು ‍ಪಶ್ಚಿಮ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ ಎಂದು ಮಹಾರಾಷ್ಟ್ರ ಕಬ್ಬು ಕಟಾವುಗಾರರ ಹಾಗೂ ಸಾಗಣೆದಾರರ ಅಸೋಶಿಯೇಷನ್ ಹೇಳಿದೆ.

ಕಬ್ಬು ಕಟಾವು ಕಾರ್ಮಿಕರು ಮತದಾನ ಮಾಡುವ ತಮ್ಮ ಹಕ್ಕಿನಿಂದ ವಂಚಿತರಾಗದಂತೆ, ಚುನಾವಣೆಯನ್ನು ಮುಂದೂಡಬೇಕು ಎಂದು ಕೋರಿ ಅಸೋಶಿಯೇಷನ್ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠಕ್ಕೆ ಮನವಿ ಮಾಡಿದೆ.

ಆದರೆ ಕಾರ್ಮಿಕರು ತಮ್ಮ ಹಕ್ಕು ಚಲಾಯಿಸಲು ಅವರ ಸ್ಥಳಕ್ಕೆ ಮರಳಿ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ಪಶ್ಚಿಮ ಭಾರತ ಕಬ್ಬು ಮಿಲ್ ಅಸೋಶಿಯೇಷನ್ ತಿಳಿಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ