Breaking News

ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Spread the love

ಬೆಂಗಳೂರು: ರಾಜ್ಯದಲ್ಲಿರುವ ಕೆಲವು ಬಿಪಿಎಲ್‌ ಕಾರ್ಡ್‌ದಾರರಿಗೆ ಈಗ ಸದ್ದಿಲ್ಲದೆ ಸರಕಾರ “ಎಪಿಎಲ್‌ ಆಘಾತ’ ನೀಡುತ್ತಿದೆ! ಆದಾಯ ತೆರಿಗೆ ಪಾವತಿ ಸಹಿತ ಹಲವು ಮಾನದಂಡಗಳಡಿ ಕಾರ್ಯಾಚರಣೆ ನಡೆಸಿದ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಈ ಹಿಂದೆಯೇ ಸುಮಾರು 12 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಮಾಡಿದೆ.

ಆ ಪೈಕಿ ಕೆಲವರನ್ನು ಎಪಿಎಲ್‌ ಕಾರ್ಡ್‌ದಾರರಾಗಿ ಪರಿವರ್ತಿಸುವ ಕೆಲಸ ನಡೆದಿದೆ. ಅವರೆಲ್ಲ ಎಂದಿನಂತೆ ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ಮೇಲೆ ಬೆರಳಿಟ್ಟಾಗ “ಎಪಿಎಲ್‌’ ಕಾವು ತಗಲುತ್ತಿದೆ.

ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವುದು ತಪಾಸಣೆಯಿಂದ ಗೊತ್ತಾದಾಗ ಅಂತಹ ಗ್ರಾಹಕರಿಗೆ ನೋಟಿಸ್‌ ನೀಡಲಾಗುತ್ತದೆ. ಅನಂತರ ಅಮಾನತಿನಲ್ಲಿ ಇಡಲಾಗುತ್ತದೆ. ಆದರೆ ಈ ಬಾರಿ ಅಂತಹ ಕಸರತ್ತಿನ ಬದಲು ನೇರವಾಗಿ ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ಎರಡು- ಮೂರು ಸಾವಿರ ಗ್ರಾಹಕರನ್ನು ಹೀಗೆ ವರ್ಗಾಯಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ