Breaking News

ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಸುಟ್ಟು ಭಸ್ಮವಾದ ಕಿರಾಣಿ ಅಂಗಡಿ;ಓರ್ವನಿಗೆ ಗಾಯ

Spread the love

ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಸುಟ್ಟು ಭಸ್ಮವಾದ ಕಿರಾಣಿ ಅಂಗಡಿ;ಓರ್ವನಿಗೆ ಗಾಯ

ಅಥಣಿ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ಅಥಣಿ ತಾಲೂಕಿನ ಅಡಳ್ಳಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಿಗ್ಗೆ 9:00 ಗಂಟೆ ಸುಮಾರಿಗೆ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನಂದಿಸಲು ಹೋದ ಇಬ್ಬರಿಗೆ ಗಾಯಗಳಾಗಿವೆ ಓರ್ವ ಬಾಲಕನಿಗೆ ಬೆಂಕಿ ತಿವ್ರತೆಗೆ ಸುಟ್ಟ ಗಾಯಗಳಾಗಿದ್ದು.ಅಪಾರ ಪ್ರಾಮಾನದ ವಸ್ತುಗಳು ನಾಶವಾಗಿವೆ.ಸುಭಾಸ್ ಮಹಾನಿಂಗ ಸೂರ್ಯವಂಶಿ ಮಾಲೀಕತ್ವದ ಅಪ್ಪಾಜಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿದ್ದು 5 ಲಕ್ಷ ಕ್ಕೂ ಅಧಿಕ ವಸ್ತುಗಳು ನಾಶವಾಗಿವೆ.

ಬೆಂಕಿ ಅವಘಡದಲ್ಲಿ ಪ್ರೀತಮ್ ಸಂಜಯ ಕಾಂಬಳೆ (15) ಎಂಬ ಬಾಲಕನಿಗೆ ಸುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ