Breaking News

ಹುಬ್ಬಳ್ಳಿ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Spread the love

ಹುಬ್ಬಳ್ಳಿ: ತಾಲ್ಲೂಕಿನ ಮಂಟೂರು, ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಅಡವಿಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.

 

ಹೃದಯಾಘಾತವಾಗಿದ್ದ ಸ್ವಾಮೀಜಿ ಅವರನ್ನು ಇಲ್ಲಿನ ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.‌ ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಭಕ್ತರು ತಿಳಿಸಿದ್ದಾರೆ.

ಶಿವಲಿಂಗೇಶ್ವರ ಸ್ವಾಮಿಜಿ ಅವರು, ಮಂಟೂರು ಹಾಗೂ ಬಮ್ಮಿಗಟ್ಟಿ ಅಡವಿಸಿದ್ಧೇಶ್ವರ ಮಠ,

ಹುಬ್ಬಳ್ಳಿ ಹರುಷದೇವರ ಮಠ, ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಗೆರಕೊಪ್ಪ- ಬೊಪ್ಪಗೊಂಡನಕೊಪ್ಪ ಇಂದೂಧರೇಶ್ವರ ಮಠ, ಶಿಕಾರಿಪುರ ತಾಲ್ಲೂಕು ಬೆಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠ ಹಾಗೂ ಬೀದರ ಜಿಲ್ಲೆ ಬಸವಕಲ್ಯಾಣ ಕೆಳಗಿ ಪೀಠದ ಪೀಠಾಧಿಪತಿಗಳಾಗಿದ್ದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ