Breaking News

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಅನಾಮಧೇಯ ಪತ್ರ ಪತ್ತೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರೇಶ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಪ್ರಕರಣ ಸಂಬಂಧ ಅನಾಮಧೇಯ ಪತ್ರವೊಂದು ಪತ್ತೆಯಾಗಿದೆ. ಅದರಲ್ಲಿ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೇಸ್ ಮುಚ್ಚಿಹಾಕಬಾರದು.

ಸತ್ತವರಿಗೆ ನ್ಯಾಯ ಸಿಗಬೇಕು ಎಂಬುದಾಗಿ ಆಗ್ರಹಿಸಲಾಗಿದೆ.

ಈ ಸಂಬಂಧ ಬೆಳಗಾವಿಯ ಪೊಲೀಸ್ ಕಮೀಷನರ್, ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರಿಗೆ, ರಾಜ್ಯಪಾಲರಿಗೂ ಪತ್ರವನ್ನು ಅಡ್ರೆಸ್ ಮಾಡಲಾಗಿದೆ. ಅದರಲ್ಲಿ ಬೆಳಗಾವಿ ತಹಶೀಲ್ದಾರ ಕಚೇರಿಯ ಕ್ಲಾರ್ಕ್ ರುದ್ರಣ್ಣ ಯಡವಣ್ಣನವರ ಇವರ ಕೊಲೆಗೆ ತಹಶೀಲ್ದಾರ ಜೀಪ ಗಾಡಿ ಡ್ರೈವರನಾದ ಯಲ್ಲಪ್ಪ ಬಡಸದ ಇವನೇ ಮೂಲ ಸೂತ್ರದಾರ. ಅದು ಸೂಸೈಡ ಅಲ್ಲ. ಯಲ್ಲಪ್ಪನಿಗೆ ವಿಚಾರಣೆ ಮಾಡಿದರೇ ಕೊಲೆ ರಹಸ್ಯ ಹೊರ ಬರುತ್ತದೆ ಎಂದಿದ್ದಾರೆ.

ಇನ್ನೂ ಯಲ್ಲಪ್ಪನ ಹೆಂಡತಿಯು ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲಾ ದುಡ್ಡು ಹೊಡದಿರುತ್ತಾಳೆ. ಸತ್ತವನಿಗೆ ನ್ಯಾಯ ಸಿಗಬೇಕು. ಕೇಸ್ ಮುಚ್ಚಿ ಹಾಕಬಾರದು ಎಂಬುದಾಗಿ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ