Breaking News

ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರು ಸರ್ಕಾರದ ವಿರುದ್ಧ ಆಕ್ರೋಶ

Spread the love

ಸದ್ಯ ಕರ್ನಾಟಕದಲ್ಲಿ ಪಡಿತರ ಚೀಟಿ ಪರಿಷ್ಕರಣೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಮ್ಮ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಪಡಿತರ ಚೀಟಿ ಪರಿಷ್ಕರಣೆ ವಿಚಾರವಾಗಿ ಎದ್ದಿರುವ ಗೊಂದಲಗಳಿಗೆ ಆಹಾರ ಇಲಾಖೆ ಸಚಿವ ಕೆ.ಎಚ್​ ಮುನಿಯಪ್ಪ ಸ್ಪಷ್ಟನೆ ಆಹಾರ ಇಲಾಖೆ ಸಚಿವ ಕೆ.ಎಚ್​ ಮುನಿಯಪ್ಪ ಸ್ಪಷ್ಟನೆನೀಡಿದ್ದಾರೆ. ​​ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್​ಗಳನ್ನು​ ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್ ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

, ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್​ಗಳನ್ನು ಎಪಿಎಲ್​ಗೆ ಸೇರಿಸಲಾಗಿದೆ. ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದರು.

ಬಿಪಿಎಲ್​ಗೆ ಅರ್ಹರಿದ್ದವರ ಕಾರ್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್​ ಮರುಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.ಬಿಪಿಎಲ್ ಕಾರ್ಡ್​ದಾರರನ್ನು ಎಪಿಎಲ್​ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ