Breaking News

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ

Spread the love

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು.

ನಬಾರ್ಡ್‌ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ, ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದ್ದಾರೆ, ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

ಈ ಮೊದಲು ದೆಹಲಿ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ, ‘ನಬಾರ್ಡ್‌ ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಸಾಲ ನೀಡಿತ್ತು. ಈ ವರ್ಷ 2,340 ಕೋಟಿಗೆ ಕಡಿತ ಮಾಡಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು’ ಎಂದಿದ್ದರು. 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿಗಳ ಅಲ್ಪಾವಧಿಯ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಕರ್ನಾಟಕ ಹೊಂದಿದೆ ಎಂದು ಒತ್ತಿ ಹೇಳಿದರು. 2023-24ರಲ್ಲಿ ರಾಜ್ಯವು ಸಹಕಾರಿ ಸಾಲ ರಚನೆಯ ಮೂಲಕ ಈಗಾಗಲೇ 22,902 ಕೋಟಿ ರೂ. ಸಾಲ ನೀಡಿದೆ


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ