Breaking News

ವಡ್ಡರವಾಡಿಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್

Spread the love

: ಬೆಳಗಾವಿ ನಗರದ ವಡ್ಡರವಾಡಿಯಲ್ಲಿ ಕೆಲ ದಿನಗಳ ಹಿಂದೆ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.‌ ಆರೋಪಿ ಮಹಿಳೆಯ ಪುತ್ರ ಹಲ್ಲೆಗೊಳಗಾದ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾನೆ. 

ಹಲ್ಲೆಗೊಳಗಾದ ಮಹಿಳೆ ವಿರುದ್ಧ 11 ವರ್ಷ ಬಾಲಕನೊಬ್ಬ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾನೆ.

ಹಲ್ಲೆ ಆರೋಪ ಹೊತ್ತ ಮಹಿಳೆಯ ಪುತ್ರ ದೂರು ನೀಡಿದ್ದಾನೆ. ‘ಅಪರಿಚಿತರು ಮನೆಗೆ ಬಂದಾಗ ನನ್ನ ಕೈಯಿಂದಲೇ ಮದ್ಯ, ಸಿಗರೇಟ್, ಕಾಂಡೋಮ್ ಸೇರಿದಂತೆ ಇತರ ವಸ್ತುಗಳನ್ನು ತರಿಸುತ್ತಿದ್ದರು.

ಈ ವಿಚಾರವನ್ನು ನಾನು ನನ್ನ ತಾಯಿಗೆ ಹೇಳಿದೆ. ಇದರಿಂದ ಕೋಪಗೊಂಡ ನನ್ನ ತಾಯಿ ಮಹಿಳೆಯನ್ನು ವಿಚಾರಿಸಲು ಹೋಗಿದ್ದರು.

ಅಷ್ಟಕ್ಕೆ ನನ್ನ ತಾಯಿಯ ಮೇಲೆ ಕೇಸ್ ಹಾಕಿ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ನನಗೆ ನ್ಯಾಯ ಕೊಡಿಸಿ’ ಎಂದು ದೂರಿನಲ್ಲಿ ಬರೆದಿದ್ದಾನೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ