ಗದಗ, ನವೆಂಬರ್ 23: ಪೊಲೀಸರ್ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿನ (Shot) ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ.
ಆರೋಪಿ ಬಗರ್ ಅಲಿ ಇರಾನಿ ಮೇಲೆ ಫೈರಿಂಗ್ ಮಾಡಲಾಗಿದೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಬಂಧಿಸಲಾಗಿತ್ತು.
ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ ಬರುವಾಗ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಆರೋಪಿ ಬಗರ್ ಅಲಿ ಇರಾನಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ್ದ. ಬಡಾವಣೆ ಠಾಣೆ ಸಿಬ್ಬಂದಿ ಹನುಮಂತ ಓಲೇಕಾರ, ಅಶೋಕ್ ಗಡದ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಗರ್ ಅಲಿ ಮೊಣಕಾಲಿಗೆ ಸಿಪಿಐ ಧೀರಜ್ ಶಿಂಧೆ ಗುಂಡು ಹಾರಿಸಿದ್ದಾರೆ. ಸದ್ಯ ರೋಣ ಆಸ್ಪತ್ರೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದೆ.